ಸಹನೆ – ಗೆಲುವಿನ ದಾರಿ

ಒಂದು ಸಲ ಶಿವಾಜಿ ಮಹಾರಾಜರು ಒಂದು ಕೋಟೆಯಿಂದ ಮತ್ತೊಂದು ಕೋಟೆಗೆ ಹೊಗುವಾಗ ದಾರಿ ತಪ್ಪಿದರು. ಆಗ ಅವರು ಒಂದು ಬೆಟ್ಟ ಏರಿ ಯಾವುದಾದರು ಹಳ್ಳಿ ಇದೆಯಾ ಎಂದು ನೋಡಿದರು, ಆದರೆ ಯಾವ ಹಳ್ಳಿಯೂ ಕಾಣಿಸಲಿಲ್ಲ. ರಾತ್ರಿಯಾಗುತ್ತಿತ್ತು. ಅವರು ಬೆಟ್ಟ ಇಳಿದು ಬರುವಾಗ ದೂರದಲ್ಲಿ ದೀಪವೊಂದು ಮಿಣುಕುವುದು ಕಾಣಿಸುತ್ತಿತ್ತು. ಅದೇ ದಾರಿಯಲ್ಲಿ ಹೋದಾಗ ಅವರು ಒಂದು ಗುಡಿಸಲಿನ ಬಳಿ ಬಂದರು.

ಗುಡಿಸಲಿನಲ್ಲಿ ಒಬ್ಬ ವೃದ್ಧ ಮಹಿಳೆ ಇದ್ದಳು. ಅವಳು ಮಹಾರಾಜರನ್ನು ಒಬ್ಬ ಸೈನಿಕನಿರಬೇಕೆಂದು ತಿಳಿದು ಸ್ವಾಗತಿಸಿದಳು. ಅವನು ಹಸಿದಿರುವನೆಂದು ಅರಿತ ಮಹಿಳೆಯು ಕೈ ಕಾಲು ಮುಖ ತೊಳೆಯಲು ನೀರು ನೀಡಿದಳು ಮತ್ತು ವಿಶ್ರಮಿಸಲು ಚಾಪೆಯನ್ನು ಹಾಸಿದಳು. ಅವನು ವಿಶ್ರಮಿಸಿದ ನಂತರ ಮಹಿಳೆಯು ಬಸಿ ಬಿಸಿ ಅನ್ನ ಮತ್ತು ಸಾಂಬಾರನ್ನು ತಿನ್ನಲು ನೀಡಿದಳು.

ತುಂಬಾ ಹೊಟ್ಟೆ ಹಸಿದಿದ್ದ ಶಿವಾಜಿಯು ತಕ್ಷಣ ತಿನ್ನಲು ಬಿಸಿ ಅನ್ನಕ್ಕೆ ಕೈ ಹಾಕಿದನು. ಬಿಸಿ ತಡೆಯಲಾರದೆ ಚೀರಿದನು ಮತ್ತು ಸ್ವಲ್ಪ ಅನ್ನವನ್ನು ಚಲ್ಲಿದನು. ಇದನ್ನು ನೋಡಿದ ಮಹಿಳೆಯು ಹೇಳಿದಳು, "ಅರೇ ನೀನು ಸಹ ನಿನ್ನ ಸ್ವಾಮಿ ಶಿವಾಜಿಯಂತೆ ಗಡಿಬಿಡಿ ಮಾಡುತ್ತೀಯ. ಅದಕ್ಕೆ ಕೈ ಸುಟ್ಟುಕೊಂಡೆ ಮತ್ತು ಸ್ವಲ್ಪ ಅನ್ನವನ್ನು ಬೀಳಿಸಿದೆ".

ಶಿವಾಜಿಯು ಆಶ್ಚರ್ಯದಿಂದ, "ನನ್ನ ಸ್ವಾಮಿ ಶಿವಾಜಿಯಲ್ಲಿ ತಾಳ್ಮೆ ಇಲ್ಲ ಎಂದು ನೀನು ಯಾಕೆ ಹೇಳುತ್ತೀಯ?" ಎಂದು ಕೇಳಿದನು.

ಆಗ ಮಹಿಳೆಯು ಹೇಳಿದಳು, "ನೋಡು ಮಗನೆ, ಶಿವಾಜಿಯು ತನ್ನ ಗಡಿಬಿಡಿ ಇಂದಾಗಿ ಶತ್ರುಗಳ ಸಣ್ಣ ಕೋಟೆಯನ್ನು ಗೆಲ್ಲುವ ಬದಲಾಗಿ ದೊಡ್ಡ ದೊಡ್ಡ ಕೋಟೆಗಳನ್ನು ಗೆಲ್ಲಲು ಹೊಗುತ್ತಿದ್ದಾನೆ ಮತ್ತು ಇದರಿಂದಾಗಿ ಅವನು ತನ್ನ ವೀರ ಸೈನಿಕರನ್ನು ಕಳೆದುಕೊಳ್ಳುತ್ತಿದ್ದಾನೆ. ಅದರ ಬದಲಿಗೆ ತಾಳ್ಮೆಯಿಂದ ಮೊದಲು ಸಣ್ಣ ಸಣ್ಣ ಕೋಟೆಗಳನ್ನು ಗೆದ್ದರೆ ಅವನ ಬಲವೂ ಹೆಚ್ಚುತ್ತದೆ ಮತ್ತು ಸೈನಿಕರೂ ಉಳಿಯುತ್ತಾರೆ. ಅದೇ ರೀತಿ ನೀನು ಮೊದಲು ಬದಿಯಲ್ಲಿರುವ ತಣ್ಣಗಿರುವ ಅನ್ನವನ್ನು ಮೊದಲು ತಿನ್ನು".

ಶಿವಾಜಿಯು ಕೂಡಲೇ ವೃದ್ಧ ಮಹಿಳೆಯ ಮಾತಿನ ಹಿಂದಿರುವ ಅರ್ಥವನ್ನು ಅರಿತನು ಮತ್ತು ಯಾವುದೇ ತೀರ್ಮಾನವನ್ನು ಗಡಿಬಿಡಿಯಲ್ಲಿ ಮಾಡಬಾರದೆಂದು ಅರಿತನು.

ಮೇಲಿನ ಕಥೆಯಿಂದ ನಮಗೆ ತಾಳ್ಮೆಯ ಬೆಲೆಯು ತಿಳಿಯುತ್ತದೆ. ಯಾವುದೇ ತೀರ್ಮಾನ ಮಾಡುವಾಗ ತಾಳ್ಮೆಯಿಂದ ಸಣ್ಣ ಸಣ್ಣ ಗುರಿಯನ್ನು ಇಟ್ಟುಕೊಂಡು ಅದರ ಮುಖಾಂತರ ದೊಡ್ಡ ಧ್ಯೇಯವನ್ನು ಸಾಧಿಸಬೇಕು. ಉದಾಹರಣೆಗೆ ನಾವು ದಿನಾ ಗಂಟೆಗೆ ಏಳುತ್ತೇವೆ, ಅದರ ಬದಲಿಗ ಗಂಟೆಗೆ ಏಳಬೇಕೆಂದಿದ್ದರೆ, ಒಂದೇ ಸಲ ಗಂಟೆಗೆ ಏಳುವ ಬದಲು ಪ್ರತಿದಿನ ಕಾಲು ಗಂಟೆ ಬೇಗ ಏಳಲು ಪ್ರಯತ್ನಿಸಬೇಕು.

Leave a Comment