Menu Close

‘ಧಾರ್ಮಿಕ ದತ್ತಿ ಇಲಾಖೆಯ ತಿದ್ದುಪಡಿ ಮಸೂದೆ’ ತಿರಸ್ಕರಿಸಿದ ಮಾನ್ಯ ರಾಜ್ಯಪಾಲರ ನಿರ್ಣಯಕ್ಕೆ ಸ್ವಾಗತ ! – ದೇವಸ್ಥಾನ ಮಹಾಸಂಘ

ಇದು ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘಕ್ಕೆ ಲಭಿಸಿದ ಜಯ

ಕರ್ನಾಟಕ ದೇವಸ್ಥಾನ ಮಹಾಸಂಘವು ಈ ಮಸೂದೆ ಖಂಡಿಸಿ ರಾಜ್ಯಾದಾದ್ಯಂತ 15 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಆಂದೋಲನ ನಡೆಸಿ ಮನವಿ ನೀಡಿತ್ತು !

ಜಿಲ್ಲಾಡಳಿತ ಕಛೇರಿ, ಶಿವಮೊಗ್ಗ

ಜಿಲ್ಲಾಡಳಿತ ಕಛೇರಿ, ದಕ್ಷಿಣ ಕನ್ನಡ

ಬೆಂಗಳೂರು : ಕೆಲವು ದಿನಗಳ ಹಿಂದೆ ಕರ್ನಾಟಕ ಸರಕಾರವು ಧಾರ್ಮಿಕ ದತ್ತಿ ಇಲಾಖೆಯ ಮಸೂದೆಗೆ ತಿದ್ದುಪಡಿ ತಂದಿದ್ದು, ಹೊಸ ತಿದ್ದುಪಡಿ ಮಸೂದೆಯ ಪ್ರಕಾರ ಬಿ ಗ್ರೇಡ್ ದೇವಸ್ಥಾನಗಳು 5% ಆದಾಯ ಮತ್ತು 1 ಕೋಟಿಗಿಂತ ಹೆಚ್ಚು ಆದಾಯ ತರುವ ಎ ಗ್ರೇಡ್ ದೇವಸ್ಥಾನಗಳು 10% ಶೇ ತೆರಿಗೆಯನ್ನು ಸರಕಾರದ ಕಾಮನ್ ಪೂಲ್ ಫಂಡ್ ಗೆ ನೀಡುವ ಬಗ್ಗೆ ತಿದ್ದುಪಡಿಯನ್ನು ತರಲಾಗಿತ್ತು. ಅಷ್ಟೇ ಅಲ್ಲದೇ ಎ ಗ್ರೇಡ್ ದೇವಾಲಯಗಳ ಮೂಲಭೂತ ಸೌಕರ್ಯದ ನೆಪದಲ್ಲಿ 9 ಜನರ ಜಿಲ್ಲಾ ಮಟ್ಟದ ಉನ್ನತ ಸಮಿತಿ ಮತ್ತು ರಾಜ್ಯ ಮಟ್ಟದ 14 ಜನರ ಸಮಿತಿ ರಚನೆ ಮಾಡಿತ್ತು.

 

ದಾವಣಗೆರೆ

 ರಾಯಭಾಗ

ಈ ಕಾಯ್ದೆಯನ್ನು ಕರ್ನಾಟಕ ದೇವಸ್ಥಾನ ಮಹಾಸಂಘವು ತೀವ್ರವಾಗಿ ಖಂಡಿಸಿತ್ತು ಮತ್ತು ಈ ಕಾಯ್ದೆಯನ್ನು ರದ್ದುಗೊಳಿಸುವಂತೆ ರಾಜ್ಯದ 15 ಕ್ಕೂ ಅಧಿಕ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿತ್ತು. ಈ ಬೇಡಿಕೆಗೆ ಬುಧವಾರ ಮಾರ್ಚ್ 20 ರಂದು ಪ್ರತಿಕ್ರಿಯಿಸಿದ ಮಾನ್ಯ ರಾಜ್ಯಪಾಲರು ಈ ಪ್ರಸ್ತಾಪಿತ ಮಸೂದೆಯಲ್ಲಿ ಅನೇಕ ಅಂಶಗಳು ತಾರತಮ್ಯತೆಯಿಂದ ಕೂಡಿದೆ ಎಂದು ಹೇಳಿ ಅದನ್ನು ಸರಕಾರಕ್ಕೆ ವಾಪಾಸ್ ಕಳಿಸಿದ್ದಾರೆ. ಮಾನ್ಯ ರಾಜ್ಯಪಾಲರಾದ ತಾವರ್ ಚಂದ್ ಗೆಹಲೋಟ್ ಅವರ ಈ ಮಹತ್ವಪೂರ್ಣ ನಿರ್ಣಯವನ್ನು ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಸ್ವಾಗತಿಸುತ್ತದೆ ಮತ್ತು ಹಿಂದೂ ದೇವಸ್ಥಾನಗಳ ರಕ್ಷಣೆಗಾಗಿ ಮಹಾಸಂಘವು ಇದೇ ರೀತಿ ಸನ್ನದ್ಧವಾಗಿರುವುದು ಎಂದು ರಾಜ್ಯ ಸಂಯೋಜಕರಾದ ಶ್ರೀ. ಮೋಹನ ಗೌಡ ತಿಳಿಸಿದ್ದಾರೆ.

ಕಾರಣ ನೀಡಿದ ರಾಜ್ಯಪಾಲರು

‘ಹೈಕೋರ್ಟ್‌ನ ಧಾರವಾಡ ಪೀಠವು ರಿಟ್‌ ಅರ್ಜಿ 3440/2005ರಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ –1997 ಮತ್ತು ಅದಕ್ಕೆ ತಂದಿರುವ ತಿದ್ದುಪಡಿಗಳನ್ನು ಈಗಾಗಲೇ ವಜಾ ಮಾಡಿದೆ. ಹೈಕೋರ್ಟ್‌ ನೀಡಿದ್ದ ಈ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಹೈಕೋರ್ಟ್‌ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದ್ದು, ಅಂತಿಮ ವಿಚಾರಣೆ ಬಾಕಿ ಇದೆ. ಈ ಹಂತದಲ್ಲಿ ತಿದ್ದುಪಡಿ ಮಾಡಬಹುದೇ ಎಂಬ ಬಗ್ಗೆ ಹೆಚ್ಚಿನ ಸ್ಪಷ್ಟೀಕರಣದ ಅಗತ್ಯವಿದೆ’ ಎಂದು ಉಲ್ಲೇಖಿಸಿರುವ ರಾಜ್ಯಪಾಲರು ಕಡತವನ್ನು ವಾಪಸ್ ಕಳುಹಿಸಿದ್ದಾರೆ.

ಸರ್ಕಾರಕ್ಕೆ ರಾಜ್ಯಪಾಲರ ಚಾಟಿ

ಈ ಬಗ್ಗೆ ಪ್ರತಿಕ್ರಿಯಿಸಿದ ಮಾನ್ಯ ರಾಜಪಾಲರು ‘ಹಿಂದೂ ಧಾರ್ಮಿಕ ಸಂಸ್ಥೆಗಳಿಗೆ ಸಂಬಂಧಿಸಿ ತರಲಾದ ತಿದ್ದುಪಡಿಯನ್ನು ಇತರೆ ಧಾರ್ಮಿಕ ಸಂಸ್ಥೆಗಳನ್ನೂ ಸೇರಿಸಿಕೊಂಡು ಸರಕಾರ ಕಾಯ್ದೆ ರಚಿಸಬಹುದೇ ಎಂದು ಪ್ರಶ್ನಿಸಿದ್ದಾರೆ. ವಾಪಸ್ ಕಳುಹಿಸಿರುವ ಮಸೂದೆಗೆ ಸಂಬಂಧಿಸಿದ ಕಡತದಲ್ಲಿ ಈ ಕುರಿತು ಅವರು ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

Related News